POLICE BHAVAN KALABURAGI

POLICE BHAVAN KALABURAGI

12 September 2015

Kalaburagi District Reported Crimes

ಹಲ್ಲೆ ಪ್ರಕರಣ :
ಅಫಜಲಪೂರ ಠಾಣೆ : ಶ್ರೀ ಮಾಹಾದೇವಪ್ಪ ತಂದೆ ಲಗಮಣ್ಣ ಬಳಗಾರ ಸಾ|| ಕರಜಗಿ ಗ್ರಾಮ ತಾ|| ಅಫಜಲಪೂರ ರವರ  ಹೊಲ ಸರ್ವೆ ನಂಬರ 234 ನೇದ್ದಕ್ಕೆ ಹೊಂದಿ ನಮ್ಮೂರ ಅಮೋಗಿ ತಂದೆ ಸಿದ್ರಾಮ ಕಾಮನಕೇರಿ ಇವರ ಹೊಲ ಇರುತ್ತದೆ. ಸದರಿ ಅಮೋಗಿ ಈತನು ಗಳೆ ಹೊಡೆದಾಗೊಮ್ಮೆ ನನ್ನ ಹೊಲ ಹೊಡೆಯುತ್ತಾ ಬರುತ್ತಿರುತ್ತಾನೆ. ನಾನು ಅಮೋಗಿ ಈತನಿಗೆ ನನ್ನ ಹೊಲದಲ್ಲಿ ಹೆಚ್ಚಿಗೆ ಹೊಡೆಯಬೇಡ ನಿನ್ನ ಹೊಲ ಎಷ್ಟು ಇರುತ್ತೊ ಅಷ್ಟು ಹೊಡೆ ಅಂತಾ ಹೇಳಿದಕ್ಕೆ ಅವನಿಗೂ ನನಗು ಜಗಳ ಆಗುತ್ತಾ ಬಂದಿರುತ್ತದೆ. ದಿನಾಂಕ 11-09-2015 ರಂದು ಸಾಯಂಕಾಲ 5:00 ಗಂಟೆ ಸುಮಾರಿಗೆ ನಾನು ಹೊಲದಲ್ಲಿದ್ದಾಗ ಸದರಿ ಅಮೊಗಿ ಈತನಿಗೂ ನನಗು ಬಾಯಿ ಬಾಂದಾರಿ ಸಂಭಂದ ಜಗಳ ಆಗಿರುತ್ತದೆ. ಸಂಜೆ 7:00 ಗಂಟೆ ಸುಮಾರಿಗೆ ನಾನು ನಮ್ಮ ಮನೆಯಿಂದ ಹೊರಗೆ ಹೊಗುತ್ತಿದ್ದಾಗ ನಮ್ಮೂರ ಸಾಯಬಣ್ಣ ಮಗಿ ಇವರ ಮನೆಯ ಮುಂದೆ ಹೊಗುತ್ತಿದ್ದಾಗ ಅಮೋಗಿ ತಂದೆ ಸಿದ್ರಾಮ ಕಾಮನಕೇರಿ ಮತ್ತು ಅವನ ಅಣ್ಣ ತುಕಾರಾಮ ತಂದೆ ಸಿದ್ರಾಮ ಕಾಮನಕೇರಿ ಮತ್ತು ಅವನ ತಂಗಿಯ ಗಂಡ ಭೀಮಶಾ ತಂದೆ ಬಸಣ್ಣ ಹಾದಿಮನಿ ಮೂರು ಜನರು ನನ್ನ ಎದುರಿಗೆ ಬಂದು, ಅವರಲ್ಲಿ ಅಮೋಗಿ ಈತನು ಏನೊ ಭೋಸಡಿ ಮಗನೆ ಹೊಲದಲ್ಲಿ ನನ್ನ ಜೋತೆನೆ ಜಗಳ ಮಾಡುತ್ತಿ ಅಂತಾ ನನ್ನ ಏದೆಯ ಮೇಲಿನ ಅಂಗಿ ಹಿಡಿದು ಏಳೆದಾಡಿ ಕೈಯಿಂದ ಹೊಡೆದನು ತುಕಾರಮ ಈತನು ಕಾಲಿನಿಂದ ಒದ್ದನು. ಆಗ ನನಗು ಅವರಿಗೂ ತೆಕ್ಕ ಮುಸ್ತಿ ಆಗುತ್ತಿದ್ದಾಗ ಭೀಮಶಾ ಈತನು ನನ್ನನ್ನು ಹಿಡಿದುಕೊಂಡಾಗ ಅಮೋಗಿ ಈತನು ಅಲ್ಲೆ ಸಾಯಬಣ್ಣ ಮಗಿ ಇವರ ಮನೆಯ ಮುಂದೆ ಕಟ್ಟಿಗೆ ಒಡೆಯಲು ಇಟ್ಟಿದ ಕೊಡಲಿಯನ್ನು ತಗೆದುಕೊಂಡು ನನ್ನ ತಲೆಯ ಮೇಲೆ ಹೊಡೆದನು. ಆಗ ನಾನು ಕೆಳಗೆ ಬಿದ್ದಾಗ ಮೂರು ಜನರು ಕೂಡಿಕೊಂಡು ನನಗೆ ಕಾಲಿನಿಂದ ಒದ್ದು ಗಾಯಗೋಳಿಸಿರುತ್ತಾನೆ ಅಂತಾ ಸಲ್ಲಿಸಿದ ದೂರು ಸಾರಾಂಶದ ಮೇಲಿಂದ ಅಫಜಲಪೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರಗಳ ಜಪ್ತಿ  :
ಅಫಜಲಪೂರ ಠಾಣೆ : ದಿನಾಂಕ 08-09-2015 ರಂದು  ಸೊನ್ನ ಗ್ರಾಮದ ಹತ್ತಿರ ಭೀಮಾನದಿಯಿಂದ ಅಕ್ರಮವಾಗಿ ಕಳ್ಳತನದಿಂದ ಟಿಪ್ಪರದಲ್ಲಿ ಮರಳು ತುಂಬಿಕೊಂಡು ಬರುತಿದ್ದಾನೆ. ಅಂತಾ ಬಾತ್ಮಿ ಬಂದಿ ಮೇರೆಗೆ ಪಿ.ಎಸ್.ಐ. ಅಫಜಲಪೂರ ಹಾಗು ಸಿಬ್ಬಂದಿ ಮತ್ತು ಪಂಚರೊಂದಿಗೆ ಮತ್ತು ಮಾನ್ಯ ತಹಸಿಲ್ದಾರ ಅಫಜಲಪೂರ ಸಾಹೇಬರೊಂದಿಗೆ ಸೊನ್ನ ಗ್ರಾಮದ ಹೊಸ ಊರ ಹತ್ತಿರ  ಹೋಗುತ್ತಿದ್ದಾಗ ಎದುರುಗಡೆಯಿಂದ ಒಂದು ಟಿಪ್ಪರ ಬರುತ್ತಿದ್ದು ನೋಡಿ ನಾವು ಸದರಿ ಟಿಪ್ಪರಗಳನ್ನು ನಿಲ್ಲಿಸಿ  ಚಾಲಕನ ಹೆಸರು ವಿಳಾಸ ವಿಚಾರಿಸಲಾಗಿ ತನ್ನ ಹೆಸರು ಬಸವರಾಜ ತಂದೆ ಮಲ್ಲಿಕಾರ್ಜುನ ಹೂಗಾರ ವ||27 ವರ್ಷ ಜಾ|| ಹೂಗಾರ ಉ|| ಟಿಪ್ಪರ ಚಾಲಕ ಸಾ|| ಅರಳಗುಂಡಗಿ ತಾ||ಜೇವರ್ಗಿ  ಅಂತಾ ತಿಳಿಸಿದ್ದು  ಪಂಚರ ಸಮಕ್ಷಮ ನಾನು ಹಾಗೂ ಮಾನ್ಯ ತಹಸಿಲ್ದಾರ ಸಾಹೇಬರು ಟಿಪ್ಪರನ್ನು  ಚಕ್ಕ ಮಾಡಲು, ಅಶೋಕ ಲ್ಯಾಲೆಂಡ್‌ ಕಂಪನಿಯ  ಟಿಪ್ಪರ ಇದ್ದು ಅದರ ನಂ ಕೆಎ-32 ಸಿ-0238 ಅಂತ ಇದ್ದು, ಸದರಿ ಟಿಪ್ಪರದಲ್ಲಿ ಮರಳು ತುಂಬಿದ್ದು ಸದರಿ ಟಿಪ್ಪರ ಚಾಲಕನಿಗೆ ಮರಳು ಸಾಗಾಣಿಕೆ ಮಾಡಲು ಸಂಬಂಧಪಟ್ಟ ಅಧೀಕಾರಿಯವರಿಂದ ಪರವಾನಿಗೆ ಪಡೆದುಕೊಂಡ ಬಗ್ಗೆ ದಾಖಲಾತಿಗಳನ್ನು ವಿಚಾರಿಸಲು, ಸದರಿಯವನು ನಾನು ಈಗಾಗಲೆ ಒಂದು ಟ್ರಿಪ್ ಮರಳನ್ನು ಸಾಗಾಣಿಕೆ ಮಾಡಿರುತ್ತೆನೆ, ಈಗ ಎರಡನೆ ಟ್ರಿಪ್ಪ ತುಂಬಿಕೊಂಡು ಹೋಗುತ್ತಿದ್ದೆನೆ ಅಂತಾ ಹೇಳಿ ತನ್ನ ಹತ್ತಿರ ಇದ್ದ ರಾಯಲ್ಟಿಯನ್ನು ತೋರಿಸಿದನು, ಸದರಿ ರಾಯಲ್ಟಿಯನ್ನು  ತಹಸಿಲ್ದಾರ ಸಾಹೇಬರು ಹಾಗೂ ನಾನು ಪಂಚರ ಸಮಕ್ಷಮದಲ್ಲಿ  ಪರಿಶಿಲಿಸಿ ನೋಡಲು ರಾಯಲ್ಟಿ ಮೇಲೆ ಟಿಪ್ಪರ ನಂ ಕೆಎ-32 ಸಿ-0238 ನೇದ್ದರಲ್ಲಿ ದಿನಾಂಕ 08-09-2015 ರಂದು ಬೆಳಿಗ್ಗೆ 06.00 ಗಂಟೆಯಿಂದ ದಿನಾಂಕ 08-09-2015 ರಂದು ಸಾಯಂಕಾಲ 6:00 ಗಂಟೆಯ ಒಳಗೆ ಅಫಜಲಪೂರ  ಸ್ಟಾಕ ನಿಂದ ಚವಡಾಪೂರ ಮಾರ್ಗವಾಗಿ ಕಲಬುರಗಿ ಸಾಗಾಟ ಮಾಡಬೇಕು ಅಂತಾ ನಮೂದಿಸಿದ್ದು ಇತ್ತು, ಸದರಿ ಟಿಪ್ಪರ ಚಾಲಕನು ರಾಯಲ್ಟಿಯ ಪ್ರಕಾರ  ಮರಳು ಸಾಗಣಿಕೆ ಮಾಡದೇ  ಅನದಿಕೃತವಾಗಿ ಕಳ್ಳತನದಿಂದ ಸೋನ್ನ ಭಿಮಾನದಿಯಿಂದ ಟಿಪ್ಪರದಲ್ಲಿ  ಮರಳು ಸಾಗಾಣಿಕೆ ಮಾಡುತ್ತಿದ್ದರಿಂದ, ಸದರಿ ಟಿಪ್ಪರಿನ ರಾಯಲ್ಟಿಯನ್ನು ಹಾಗೂ ಅಕ್ರಮವಾಗಿ ಕಳ್ಳತನದಿಂದ ಮರಳು ಸಾಗಿಣಿಕೆ ಮಾಡುತ್ತಿದ್ದ ಮರಳು ತುಂಬಿದ ಟಿಪ್ಪರನ್ನು   ಜಪ್ತಿ ಪಂಚನಾಮೆ ಮೂಲಕ ವಶಕ್ಕೆ ತೆಗೆದುಕೊಂಡು ಅಫಜಲಪೂರ ಠಾಣೆಗೆ ನಂದು ಪ್ರಕರಣ ದಾಖಲಿಸಲಾಗಿದೆ.
ಅಫಜಪೂರ ಠಾಣೆ : ದಿನಾಂಕ 07-09-2015 ರಂದು ಅಫಜಲಪೂರದ ಕಲಬುರಗಿ ರೋಡಿನ ಲಕ್ಷ್ಮಿ ಗುಡಿ ಹತ್ತಿರ ಕಳ್ಳತನದಿಂದ ಅಕ್ರಮವಾಗಿ ಮರಳು ತುಂಬಿದ ಒಂದು ಟಿಪ್ಪರ ಕಲಬುರಗಿ ಕಡೆ ಹೊರಟಿರುತ್ತದೆ  ಅಂತಾ ಬಾತ್ಮಿ ಬಂದ ಮೇರೆಗೆ ಪಿ.ಎಸ್.ಐ. ಅಫಜಲಪೂರ ಹಾಗು ಸಿಬ್ಬಂದಿ ಮತ್ತು ಪಂಚರೊಂದಿಗೆ ಅಫಜಲಪೂರ ನೀರಾವರಿ ಆಫಿಸ್  ಹತ್ತಿರ ಹೊಗುತಿದ್ದಾಗ ಒಂದು ಟಿಪ್ಪರ ಕಲಬುರಗಿ ಕಡೆ ಹೊರಟಿದ್ದು ನಾವು ಅದರ ಹತ್ತಿರ ಹೋಗಿ ಕೈ ಸೊನ್ನೆ ಮಾಡಿ ಚಾಲಕನಿಗೆ ನಿಲ್ಲಿಸುವಂತೆ ಸೂಚನೆ ಕೊಟ್ಟಾಗ ಸದರಿ ಟಿಪ್ಪರ ಚಾಲಕನು ನಮಗೆ ಮತ್ತು ನಮ್ಮ ಪೊಲೀಸ್ ಜೀಪ ನೋಡಿದ ತಕ್ಷಣ ತನ್ನ ಟಿಪ್ಪರನ್ನು ನಿಲ್ಲಿಸಿ ಕತ್ತಲಲ್ಲಿ  ಓಡಿ ಹೋದನು. ನಂತರ ಪಂಚರ ಸಮಕ್ಷಮ ಸದರಿ ಟಿಪ್ಪರನ್ನು  ಚಕ್ಕ ಮಾಡಲು, ASHOK LEYLAND  ಕಂಪನಿಯ ಟಿಪ್ಪರ ನಂ ಕೆಎ-32 ಬಿ-8050 ಅಂತ ಇದ್ದು, ಸದರಿ ಟಿಪ್ಪರದಲ್ಲಿ ಮರಳು ತುಂಬಿದ್ದು ಇದ್ದಿತ್ತು. ಸದರಿ ಟಿಪ್ಪರನಲಿದ್ದ ಮರಳಿನ ಅಂದಾಜು ಕಿಮ್ಮತ್ತು 5000/- ರೂ ಇರಬಹುದು. .ನಂತರ ಸದರಿ ಮರಳು ತುಂಬಿದ ಟಿಪ್ಪರನ್ನು ಪಂಚರ ಸಮಕ್ಷಮ ಜಪ್ತಿ ಪಂಚನಾಮೆ ಮೂಲಕ ವಶಕ್ಕೆ ತೆಗೆದುಕೊಂಡು ಅಫಜಲಪೂರ ಠಾಣೆಗೆ ಬಂದು ಪ್ರಕರಣ ದಾಖಲಿಸಲಾಗಿದೆ.