POLICE BHAVAN KALABURAGI

POLICE BHAVAN KALABURAGI

07 June 2019

KALABURAGI DISTRICT REPORTED CRIMES

ಆಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರಗಳ ಜಪ್ತಿ  :
ಅಫಜಲಪೂರ ಠಾಣೆ : ದಿನಾಂಕ 06-06-2019 ರಂದು ಬೆಳಗಿನ ಜಾವ ಹಿಂಚಗೇರಾ ಗ್ರಾಮದ ಭೀಮಾ ನದಿಯಿಂದ ಟ್ಯಾಕ್ಟರದಲ್ಲಿ ಕಳ್ಳತನದಿಂದ ಮರಳು ಸಾಗಾಣಿಕೆ ಮಾಡುತ್ತಿದ್ದಾರೆ ಎಂದು ಖಚಿತ ಮಾಹಿತಿ ಬಂದ ಮೇರೆಗೆ ಸಿಪಿಐ ಅಫಜಲಪೂರ ಹಾಗು ಸಿಬ್ಬಂದಿ ಮತ್ತು ಪಂಚರೊಂದಿಗೆ ಹಿಂಚಗೇರಾ ಗ್ರಾಮದ ಭೀಮಾನದಿಯ ಹತ್ತಿರ ಹೋಗಿ ಟಾರ್ಚ ಬೆಳಕಿನಲ್ಲಿ ನೊಡಲಾಗಿ ನದಿಯಲ್ಲಿ ಟ್ಯಾಕ್ಟರದಲ್ಲಿ ಮರಳು ತುಂಬುತ್ತಿದ್ದರು. ಆಗ ನಾವು ಟ್ಯಾಕ್ಟರ ಹತ್ತಿರ ಹೋಗುತ್ತಿದ್ದಂತೆ ಟ್ಯಾಕ್ಟರ ಚಾಲಕ ನಮ್ಮನ್ನು ನೋಡಿ ಟ್ಯಾಕ್ಟರ ಟ್ರೈಲಿಯ ಡಂಪ ಎತ್ತಿ ಓಡಿಹೊದನು. ನಾವು ಟ್ಯಾಕ್ಟರ ಹತ್ತಿರ ಹೋಗುವಷ್ಟರಲ್ಲಿ ಟ್ಯಾಕ್ಟರದಲ್ಲಿದ್ದ ಮರಳು ನದಿಯಲ್ಲಿ ಕೆಳಗೆ ಬಿದ್ದಿತು. ನಂತರ ನಾವು ಪಂಚರ ಸಮಕ್ಷಮ ಸದರಿ ಟ್ರ್ಯಾಕ್ಟರನ್ನು ಚೆಕ್ಕ ಮಾಡಲು ಜಾನಡಿಯರ ಕಂಪನಿಯ ಟ್ಯಾಕ್ಟರ ಇದ್ದು ಪಾಸಿಂಗ್ ನಂಬರ ಕೆಎ-35 ಎಮ್-7684 ಸದರಿ ಟ್ಯಾಕ್ಟರ CH NO :- PY5310S037904 ENG NO:- PY3029D195662 ಅಂತಾ ಇರುತ್ತದೆ. ಸದರಿ ಟ್ಯಾಕ್ಟರ ಟ್ರೈಲಿಗೆ ಎಲ್ಲಿಯು ನಂಬರ ಇದ್ದಿರುವುದಿಲ್ಲ. ಸದರಿ ಟ್ರ್ಯಾಕ್ಟರ .ಕಿ 5,00,000/-ರೂ  ಇರಬಹುದು. ನಂತರ ಸದರಿ ಟ್ರ್ಯಾಕ್ಟರನ್ನು ಜಪ್ತಿ ಪಂಚನಾಮೆ ಮೂಲಕ ವಶಕ್ಕೆ ತಗೆದುಕೊಂಡು ಅಫಜಲಪೂರ ಠಾಣೆಗೆ ಬಂದು ಠಾಣಾ ಗುನ್ನೆ ನಂ 79/2019 ಕಲಂ 379 ಐಪಿಸಿ ಮತ್ತು 21(1) ಎಮ್ ಎಮ್ ಡಿ ಆರ್ ಆಕ್ಟ ಪ್ರಕಾರ ಪ್ರಕರಣ ದಾಖಲಿಸಲಾಗಿದೆ.
ಅಫಜಲಪೂರ ಠಾಣೆ : ದಿನಾಂಕ 06-06-2019 ರಂದು ಆಳಂದ  ಉಪ ವಿಭಾಗ ವ್ಯಾಪ್ತಿಯಲ್ಲಿ ಬರುವ ಅಫಜಲಪೂರ ಪೊಲೀಸ್ ಠಾಣೆಗೆ ಬೇಟಿ ನೀಡುವ ಕುರಿತು ಹೋಗುತ್ತಿದ್ದಾಗ ಹಿಂಚಗೇರಾ ಗ್ರಾಮದ ಭೀಮಾ ನದಿಯಲ್ಲಿ ಅನದಿಕೃತವಾಗಿ ಟ್ರ್ಯಾಕ್ಟರದಲ್ಲಿ ಮರಳು ತುಂಬುತ್ತಿದ್ದಾರೆ ಎಂದು ಖಚಿತ ಮಾಹಿತಿ ಬಂದ ಮೇರೆಗೆ ಡಿ.ವಾಯ್.ಎಸ್.ಪಿ  ಆಳಮದ ರವರು ಹಾಗು ಸಿಬ್ಬಂದಿ ಮತ್ತು ಪಂಚರೊಂದಿಗೆ ಹಿಂಚಗೇರಾ ಗ್ರಾಮದ ಭೀಮಾ ನದಿಯ ಹತ್ತಿರ ಹೋಗುತ್ತಿದ್ದಾಗ ಭೀಮಾ ನದಿಯಲ್ಲಿ  ಒಂದು ಟ್ರ್ಯಾಕ್ಟರದಲ್ಲಿ ಮರಳು ತುಂಬುತ್ತಿದ್ದರು, ನಾವು ಟ್ಯಾಕ್ಟರ ಹತ್ತಿರ ಹೋಗುವಷ್ಟರಲ್ಲಿ ಟ್ಯಾಕ್ಟರ ಚಾಲಕನು ನಮ್ಮ ಪೊಲೀಸ್ ಜೀಪನ್ನು ನೋಡಿ ತನ್ನ ಟ್ರಾಕ್ಟರ ಟ್ರೈಲಿಯ ಡಂಪ ಎತ್ತಿ ಓಡಿ ಹೋದನು. ನಾವು ನದಿಯಲ್ಲಿ ನಡೆದುಕೊಂಡು ಟ್ಯಾಕ್ಟರ ಹತ್ತಿರ ಹೋಗುವಷ್ಟರಲ್ಲಿ ಟ್ಯಾಕ್ಟರದಲ್ಲಿದ್ದ ಮರಳು ಡಂಪ ಆಗಿ ಕೆಳಗೆ ನದಿಯಲ್ಲಿ ಬಿದ್ದಿತು. ನಂತರ ನಾವು ಪಂಚರ ಸಮಕ್ಷಮ ಸದರಿ ಟ್ಯಾಕ್ಟರ ಚೆಕ್ ಮಾಡಿ ನೋಡಲು ಜಾನಡಿಯರ ಕಂಪನಿಯ ಟ್ಯಾಕ್ಟರ ಇದ್ದು ಅದರ ಪಾಸಿಂಗ್ ನಬರ ಇರಲಿಲ್ಲ. ಅದರ ಚೆಸ್ಸಿ ನಂ PY5310S073977 ಇಂಜೆನ್ ನಂ PY3029D285287 ಅಂತ ಇರುತ್ತದೆ. ಟ್ಯಾಕ್ಟರ ಟ್ರೈಲಿಗೆ ನಂಬರ ಹಾಕಿರುವುದಿಲ್ಲ. ಟ್ರ್ಯಾಕ್ಟರ ಅಂದಾಜು ಕಿಮ್ಮತ್ತು 500000/- ರೂ ಆಗಬಹುದು. ನಂತರ ಸದರಿ ಟ್ರ್ಯಾಕ್ಟರನ್ನು ಜಪ್ತಿ ಮಾಡಿಕೊಂಡು ಅಫಜಲಪೂರ ಠಾಣೆಗೆ ಬಂದು ಠಾಣಾ  ಗುನ್ನೆ ನಂ 80/2019 ಕಲಂ 379 ಐಪಿಸಿ ಮತ್ತು 21(1) ಎಮ್.ಎಮ್.ಡಿ.ಆರ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಆಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿದ್ದವನ ಬಂಧನ :
ರಾಘವೇಂದ್ರ ನಗರ ಠಾಣೆ : ದಿನಾಂಕ 06.06.2019 ರಂದು ಬೆಳ್ಳಿಗ್ಗೆ ರಾಘವೇಂದ್ರ ನಗರ  ಠಾಣಾ ವ್ಯಾಪ್ತಿಯ ಕುಂಬಾರ ಗಲ್ಲಿಯ ನಾಗರ ಕಟ್ಟಿ ಹತ್ತಿರ ಒಬ್ಬ ವ್ಯಕ್ತಿ ಸರಕಾರದ ಯಾವುದೆ ಪರವಾನಿಗೆ ಇಲ್ಲದೆ ಅನಧೀಕೃತವಾಗಿ ಮಧ್ಯ ಮಾರಾಟ ಮಾಡುತ್ತಿದ್ದಾರೆ ಅಂತ ಖಚಿತ ಬಾತ್ಮಿ ಮೇರೆಗೆ ಪಿ.ಐ. ರಾಘವೇಂದ್ರ ನಗರ ಠಾಣೆ ಹಾಗು ಸಿಬ್ಬಂದಿ ಮತ್ತು ಪಂಚರೊಂದಿಗೆ  ಬಾತ್ಮಿಯಂತೆ ಸ್ಥಳಕ್ಕೆ ಹೋಗಿ ನೋಡಲು ಕುಂಬಾರ ಗಲ್ಲಿಯ ನಾಗರ ಕಟ್ಟಿ ಹತ್ತಿರ ಪಾನ ಶಾಪನಲ್ಲಿ ಉತ್ತರ ಮುಖ ಮಾಡಿಕೊಂಡಿರುವ ಒಂದು ಪಾನ ಶಾಪನಲ್ಲಿ ಒಬ್ಬ ವ್ಯಕ್ತಿ ಪ್ಲಾಸ್ಟಿಕ ಚೀಲದಲ್ಲಿ ಮಧ್ಯದ ಟೇಟ್ರಾ ಪಾಕೇಟಗಳನ್ನು ಇಟ್ಟುಕೊಂಡು ಮಧ್ಯ ಮಾರಾಟ ಮಾಡುತ್ತಿರುವದನ್ನು ಖಚಿತ ಪಡಿಸಿಕೊಂಡು ದಾಳಿ ಮಾಡಿ ಮಧ್ಯ ಮಾರಾಟ ಮಾಡುತ್ತಿದ್ದವರನ್ನು ವಶಕ್ಕೆ ಪಡೆದುಕೊಂಡು ಅವನ ಹೆಸರು ವಿಳಾಸ ವಿಚಾರಿಸಲು ಸದರಿಯವನು ತನ್ನ ಹೆಸರು ಆನಂದ ತಂದೆ ಸುಭಾಷ ಗುತ್ತೇದಾರ ಸಾಃ ಕುಂಬಾರ ಗಲ್ಲಿಯ ನಾಗರ ಕಟ್ಟಿ ಬ್ರಹ್ಮಪೂರ ಕಲಬುರಗಿ ಅಂತ ತಿಳಿಸಿದ್ದು, ಸದರಿಯವನ ಅಂಗಶೋಧನೆ ಮಾಡಲು ಸದರಿಯವನ ಹತ್ತಿರ ನಗದು ಹಣ 200/- ರೂ ದೊರೆತಿದ್ದು ಸ್ಥಳದಲ್ಲಿ ಪರಿಶೀಲಿಸಿ ನೋಡಲು ಮಾರಾಟ ಕುರಿತು ಇಟ್ಟಿದ್ದ  90 ಎಮ್.ಎಲ್.ದ ಓರಿಜಿನಲ್ ಚ್ವಾಯಿಸ್ ವಿಸ್ಕಿ 125 ಟೇಟ್ರಾ ಪಾಕೇಟಗಳು ಸಿಕ್ಕಿದ್ದು  ಒಂದು ಟೇಟ್ರಾ ಪಾಕೇಟ ಬೇಲೆ 30.ರೂ 32 ಪೈಸೆ. ಇದ್ದು ನಂತರ ಸದರಿಯವನಿಗೆ ಮಧ್ಯ ಮಾರಾಟ ಮಾಡುತ್ತಿರುವ ಬಗ್ಗೆ ಲೈಸನ್ಸ ಹಾಗೂ ಎಲ್ಲಿಂದ ಯಾವಾಗ ತಂದು ಮಾರಾಟ ಮಾಡುತ್ತಿರುವೆ ಅಂತ ವಿಚಾರಿಸಿದಾಗ ಸದರಿಯವನು ತಿಳಿಸಿದೆನೆಂದರೆ ನನ್ನ ಹತ್ತಿರ ಯಾವುದೇ ಲೈಸನ್ಸ ಪತ್ರ ಇರುವದಿಲ್ಲ. ನಾನು ಕಲಬುರಗಿ ನಗರದಲ್ಲಿರುವ ಬೇರೆ ಬೇರೆ ವೈನ್ಸ್ ಶಾಫಗಳಿಂದ ಕುಡಿಯುವದಕ್ಕೆಂದು ತೆಗೆದುಕೊಂಡು ಬಂದು ಸಂಗ್ರಹ ಮಾಡಿ ಇಟ್ಟಿದ್ದು ಇಂದು ಬೆಳಿಗ್ಗೆ 6.30 ಗಂಟೆಯಿಂದ ಮಾರಾಟ ಮಾಡುವದಕ್ಕೆ ಪ್ರಾರಂಬಿಸಿರುತ್ತೇನೆ. ಅದರಲ್ಲಿ  ಕೆಲವು ಪಾಕೀಟಗಳು ಮಾರಾಟ ಮಾಡಿದ್ದು ಆ ಮಾರಾಟ ಮಾಡಿದರಿಂದ 200 ನಗದು ಹಣ ಬಂದಿರುತ್ತವೆ ಅಂತಾ ತಿಳಿಸಿದ್ದು ಉಳಿದ 124 ಮಧ್ಯ ಟೇಟ್ರಾ ಪಾಕೇಟಗಳನ್ನು ಅ:ಕಿ: 3,759. ರೂ 60 ಪೈಸಾ ನೇದ್ದು ಒಂದು ರಟ್ಟಿನ ಡಬ್ಬಿಯಲ್ಲಿ ಹಾಕಿ ಜಪ್ತಿ ಮಾಡಿಕೊಂಡು ಸದರಿಯವನೊಂದಿಗೆ ರಾಘವೇಂದ್ರ ನಗರ ಠಾಣೆಗೆ ಬಂದು  ಠಾಣೆ ಗುನ್ನೆ ನಂ 60/2019 ಕಲಂ 32,34 ಕೆ.ಇ ಆಕ್ಟ ಪ್ರಕಾರ ಪ್ರಕರಣ ದಾಖಲಿಸಲಾಗಿದೆ.
ಅಪಘಾತ ಪ್ರಕರಣ :
ಸಂಚಾರಿ ಠಾಣೆ 01 : ದಿನಾಂಕ 06.06.2019 ರಂದು ಮದ್ಯಾಹ್ನ ಮೃತ ನಯೀಮ ಇತನು ತನ್ನ ಮೋಟಾರ ಸೈಕಲ ನಂ ಟಿ.ಎಸ್-34/ಎ-0263 ನೇದ್ದರ ಹಿಂದುಗಡೆ ಮಹ್ಮದ ಜಾಕೀರ ಮತ್ತು ಉಮರ ಇವರನ್ನು ಕೂಡಿಸಿಕೊಂಡು ಜೇವರಗಿಯಿಂದ ಶಹಾಬಾದನಲ್ಲಿರುವ ಸ್ವಿಮ್ಮಿಂಗ ಪೂಲಗೆ ಹೋಗಿ ಈಜಾಡಿ ವಾಪಸ್ಸ ಜೇವರಗಿ ಕಡೆಗೆ ಹೋಗುವಾಗ ಕಲಬುರಗಿ ಜೇವರಗಿ ಮುಖ್ಯ ರಸ್ತೆಯ ಮೇಲೆ ಬರುವ ಸೋಮನಾಥ ಹಳ್ಳಿ ಕ್ರಾಸ ಸಮೀಪ ರೋಡ ಮೇಲೆ ಖಾಜಾ ಹುಸೆನ ಇತನು ತನ್ನ ಮೋಟಾರ ಸೈಕಲ ನಂ ಕೆಎ-28/ಇಬಿ-8368 ನೇದ್ದರ ಹಿಂದುಗಡೆ ಮುಜೀಬ, ಮುಜಾಮೀಲ್,ಹಾಗು ಸೊಹೇಲ ರವರನ್ನು ಕೂಡಿಸಿಕೊಂಡು ಜೇವರಗಿ ಕಡೆಯಿಂದ ಕಲಬುರಗಿ ಕಡೆಗೆ ಹೋಗುವ ಕುರಿತು ತನ್ನ ಮೋಟರ ಸೈಕಲನ್ನು ಅತಿವೇಗವಾಗಿ ಮತ್ತು ಅಲಕ್ಷತನದಿಂದ ಚಲಾಯಿಸಿಕೊಂಡು ಬಂದು ಎದುರಿನಿಂದ ನಯಿಮ ಇತನ ಮೋಟಾರ ಸೈಕಲಕ್ಕೆ ಡಿಕ್ಕಿಪಡಿಸಿ ಅಪಘಾತ ಮಾಡಿ ಉಮರ, ಮಹ್ಮದ ಜಾಕೀರ್ ಇವರಿಗೆ ಸಾದಾಗಾಯ ಹಾಗೂ ಮುಜೀಬ, ಮುಜಾಮೀಲ್, ಸೊಹೇಲ ಹಾಗೂ ನಯೀಮ ಇವರಿಗೆ ಭಾರಿಗಾಯಗೊಳಿಸಿದ್ದರಿಂದ ನಯೀಮ ಇತನು ಅಪಘಾತ ಸ್ಥಳದಲ್ಲಿ ಮೃತಪಟ್ಟಿದ್ದು ಆರೋಪಿ ಖಾಜಾ ಹುಸೇನ ಇತನು ಕೂಡಾ ಭಾರಿಗಾಯ ಹೊಂದಿ ಸ್ಥಳದಲ್ಲಿ ಮೃತಪಟ್ಟಿದ್ದು ಇರುತ್ತದೆ.  ಅಂತಾ ಶ್ರೀ ಉಮರ ತಂದೆ ಇಸ್ಮಾಯಿಲ್ ಶೇಖ ಸಾ: ಖಾಜಾ ಕಾಲೋನಿ ಜೇವರಗಿ ಜಿ: ಕಲಬುರಗಿ  ರವರು ಸಲ್ಲಿಸಿದ ದೂರು ಸಾರಾಂಶದ ಮೇಲಿಂದ ಸಂಚಾರಿ ಠಾಣೆ 01 ರಲ್ಲಿ ಗುನ್ನೆ ನಂ 66/2019  ಕಲಂ  279, 337, 338, 304 (ಎ) ಐ.ಪಿ.ಸಿ ಬೇದ್ದರ ಪ್ರಕಾರ ಪ್ರಕರಣ ದಾಖಲಿಸಲಾಗಿದೆ.