POLICE BHAVAN KALABURAGI

POLICE BHAVAN KALABURAGI

07 January 2013

GULBARGA DISTRICT REPORTED CRIME


ಅಪಘಾತ ಪ್ರಕರಣ:
ಯಡ್ರಾಮಿ ಪೊಲೀಸ್ ಠಾಣೆ:ದಿನಾಂಕ: 06-01-2013 ರಂದು ಸಾಯಂಕಾಲ 7-30 ಪಿ.ಎಮ್ ಕ್ಕೆ  ಅರಳಗುಂಡಗಿ ಗ್ರಾಮದ ಕಡೆಯಿಂದ ಕಬ್ಬು ತುಂಬಿಕೊಂಡು ಹೊಸದಾಗಿ ಅರ್ಜುನ್ ಮಹೇಂದ್ರ ಕಂಪನಿಯ ಕೆಂಪು ಬಣ್ಣದ ಟ್ರ್ಯಾಕ್ಟರ ಚಾಲಕನು ಅತೀವೇಗವಾಗಿ ಮತ್ತು ನಿಸ್ಕಾಳಜಿತನದಿಂದ ನಡೆಸಿಕೊಂಡು ಯಡ್ರಾಮಿ ಗ್ರಾಮದ ಕನ್ಯಾ ಪ್ರೌಡ ಶಾಲೆಯ ರೋಡಿನ ಮೇಲೆ ಡಿಕ್ಕಿ ನನ್ನ ಮಗನಾದ ಬಂದಗಿಸಾಬ ಇತನಿಗೆ ಡಿಕ್ಕಿ ಪಡಿಸಿದ್ದರಿಂದ ಅವನಿಗೆ ಭಾರಿ ಪೆಟ್ಟಾಗಿ ರಕ್ತಗಾಯವಾಗಿದ್ದು, ಉಪಚಾರ ಕುರಿತು  ಯಡ್ರಾಮಿ ಸರಕಾರಿ ಆಸ್ಪತ್ರೆಯಲ್ಲಿ ಉಪಚಾರ ಕುರಿತು ಸೇರಿಕೆ ಮಾಡುವಷ್ಟರಲ್ಲಿ ಮೃತಪಟ್ಟಿರುತ್ತಾನೆ ಸದರಿ ಚಾಲಕನು ಅಪಘಾತ ಪಡೆಸಿದೊಡನೆ ತನ್ನ ಟ್ರ್ಯಾಕ್ಟರ ತಗೆದುಕೊಂಡು ಓಡಿ ಹೋಗಿರುತ್ತಾನೆ ಸದರಿ ಜಾಲಕನ ವಿರುದ್ದ ಕಾನೂನು ರೀತಿ ಕ್ರಮ ಕೈಕೊಳ್ಳಬೇಕು ಅಂತಾ ಶ್ರೀ ಲಾಲಸಾಬ ತಂದೆ ಬಾಸುಸಾಬ ಗಣಿಯಾರ ಸಾ:ಯಡ್ರಾಮಿ ರವರು ದೂರು ಸಲ್ಲಿಸಿದ ಸಾರಂಶದ ಮೇಲಿಂದ ಠಾಣೆ ಗುನ್ನೆ ನಂ:05/2013 ಕಲಂ, 279, 304(ಎ) ಐಪಿಸಿ ಸಂಗಡ 187 ಐ.ಎಮ್.ವಿ ಆಕ್ಟ ಪ್ರಕಾರ ಪ್ರಕರಣ ದಾಖಲ ಮಾಡಿಕೊಂಡು ತನಿಖೆ ಕೈಕೊಂಡಿರುತ್ತಾರೆ. 

No comments: