POLICE BHAVAN KALABURAGI

POLICE BHAVAN KALABURAGI

16 February 2020

KALABURAGI DISTRICT REPORTED CRIMES

ಮಟಕಾ ಜೂಜಾಟದಲ್ಲಿ ನಿರತವನ ಬಂಧನ :
ಅಫಜಲಪೂರ ಠಾಣೆ : ದಿನಾಂಕ: 15-02-2020 ರಂದು ಅಫಜಲಪೂರ ಠಾಣಾ ವ್ಯಾಪ್ತಿಯ  ಮಣೂರ ಗ್ರಾಮದ ಯಲ್ಲಮ್ಮ ಧೇವಿಯ ಗುಡಿಯ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯೆಕ್ತಿ ನಿಂತುಕೊಂಡು ಹೋಗಿ ಬರುವ ಜನರಿಗೆ 1 ರೂಪಾಯಿಗೆ 80 ರೂಪಾಯಿ ಗೆಲ್ಲರಿ ಅಂತಾ ಅನ್ನುತ್ತಾ ಸಾರ್ವಜನಿಕರ ಮನವೂಲಿಸಿ ಅವರಿಂದ ಹಣ ಪಡೆದು, ಅವರಿಗೆ ಅಂಕಿ ಸಂಖ್ಯೆ ಬರೆದ ಮಟಕಾ ಚೀಟಿಗಳನ್ನು ಕೊಟ್ಟು ಮಟಕಾ ಬರೆದುಕೊಳ್ಳುತ್ತಿದ್ದಾನೆ. ಅಂತಾ ಮಾಹಿತಿ ಬಂದ ಮೇರೆಗೆ ಪಿ.ಎಸ್.. ಅಫಜಲಪೂರ ಹಾಗು ಸಿಬ್ಬಂದಿ ಮತ್ತು ಪಂಚರೊಂದಿಗೆ ಮಣೂರ ಗ್ರಾಮಕ್ಕೆ ಹೋಗಿ ಯಲ್ಲಮ್ಮ ಧೇವಿಯ ಗುಡಿಯಿಂದ ಸ್ವಲ್ಪ ದೂರು ನಮ್ಮ ವಾಹನವನ್ನು ನಿಲ್ಲಿಸಿ ಮರೆಯಾಗಿ ನಿಂತು ನೋಡಲು, ಗುಡಿಯ ಮುಂದಿನ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯೆಕ್ತಿ ನಿಂತುಕೊಂಡು ಹೋಗಿ ಬರುವ ಜನಗಳಿಗೆ 1 ರೂಪಾಯಿಗೆ 80 ರೂಪಾಯಿ ಗೆಲ್ಲಿರಿ ಅಂತಾ ಕರೆದು, ಜನರಿಂದ ಹಣ ಪಡೆದು ಅವರಿಗೆ ಅಂಕಿ ಸಂಖ್ಯೆ ಬರೆದುಕೊಟ್ಟು, ಮಟಕಾ ಬರೆದುಕೊಳ್ಳುತ್ತಿದ್ದನು. ಅದನ್ನು ಖಚಿತ ಪಡಿಸಿಕೊಂಡು ದಾಳಿ ಮಾಡಿ ಹಿಡಿದು ಸದರಿಯವನ ಹೆಸರು ವಿಳಾಸ ವಿಚಾರಿಸಿ ಅಂಗ ಶೋದನೆ ಮಾಡಲಾಗಿ  ಆತನು ತನ್ನ ಹೆಸರು ಗಡ್ಡೆಪ್ಪ ತಂದೆ ಶ್ರೀಮಂತ ಬುಂಯಾರ ಸಾ|| ಮಣೂರ ಗ್ರಾಮ ತಾ|| ಅಫಜಲಪೂರ ಅಂತಾ ತಿಳಿಸಿದ್ದು, ಸದರಿಯವನ ವಶದಿಂದ ಮಟಕಾ ಜೂಜಾಟಕ್ಕೆ ಸಂಬಂಧ ಪಟ್ಟ 1) 1410/-  ರೂಪಾಯಿ ನಗದು ಹಣ ಹಾಗೂ 2) ಅಂಕಿ ಸಂಖ್ಯೆ ಬರೆದ ಮಟಕಾ ಚೀಟಿ ಹಾಗೂ 3) ಒಂದು ಪೆನ್ನ ದೊರೆತವು, ಸದರಿಯವುಗಳನ್ನು ಪಂಚರ ಸಮಕ್ಷಮ ವಶಕ್ಕೆ ತೆಗೆದುಕೊಂಡು ಸದರಿಯವನೊಂದಿಗೆ ಅಫಜಲಪೂರ ಠಾಣೆಗೆ ಬಂದು ಪ್ರಕರಣ ದಾಖಲಿಸಲಾಗಿದೆ.
ಕಳ್ಳತನದಿಂದಿಂದ ಮರಳು ಸಾಗಿಸುತ್ತಿದ್ದ ಟಿಪ್ಪರ ಜಪ್ತಿ :
ಅಫಜಲಪೂರ ಠಾಣೆ : ದಿನಾಂಕ:15-02-2020 ರಂದು ಅಫಜಲಪೂರ ಠಾಣಾ ವ್ಯಾಪ್ತಿಯ  ಸೊನ್ನ ಗ್ರಾಮದ ಭಿಮಾ ನದಿಯಿಂದ ಟಿಪ್ಪರದಲ್ಲಿ ಕಳ್ಳತನದಿಂದ ಮರಳು ತುಂಬಿಕೊಂಡು ಅಫಜಲಪೂರ ಪಟ್ಟಣದ ಕಡೆ ಬರುತ್ತಿದೆ ಅಂತಾ ಖಚಿತ ಮಾಹಿತಿ ಬಂದ ಮೇರೆಗೆ, ಪಿ.ಎಸ್.. ಅಫಜಲಪೂರ ಹಾಗು ಸಿಬ್ಬಂದಿ ಮತ್ತು ಪಂಚರೊಂದಿಗೆ  ಸೋನ್ನ ಗ್ರಾಮಕ್ಕೆ ಹೋಗುತ್ತಿರುವಾಗ ಮಾರ್ಗ ಮಧ್ಯದಲ್ಲಿ ಸೋನ್ನ ಕ್ರಾಸ್ ಹತ್ತೀರ ನಮ್ಮ ಎದುರುಗಡೆಯಿಂದ ಒಂದು ಮರಳು ತುಂಬಿದ ಟಿಪ್ಪರ ಬಂದಿದ್ದು ಆಗ ಸದರಿ ಟಿಪ್ಪರನ್ನು ನಿಲ್ಲಿಸುವಂತೆ ಅದರ ಚಾಲಕನಿಗೆ ಸೂಚನೆ ಕೊಟ್ಟಾಗ ಸದರಿ ಚಾಲಕನು ಟಿಪ್ಪರ ನಿಲ್ಲಿಸಿ ನಮ್ಮನ್ನು ನೋಡಿ ಓಡಿ ಹೊದನು ನಾವು ಅವನನ್ನು ಹಿಡಿಯಬೆಕೆಂದು ಬೆನ್ನು ಹತ್ತೀದರು ನಮಗೆ ಸಿಗಲಿಲ್ಲ ನಂತರ ಸದರಿ ಟಿಪ್ಪರನ್ನು ಪಂಚರ ಸಮಕ್ಷಮ ಚೆಕ್ ಮಾಡಿ ನೊಡಲಾಗಿ 1) ಭಾರತ ಬೆಂಜ್ ಕಂಪನಿಯದು ಇದ್ದು ಅದರ ನೊಂದಣೀ ಸಂಖ್ಯೆ ಕೆ.-32 ಸಿ-3580 ಇದ್ದು ಅದರಲ್ಲಿ ಮರಳು ತುಂಬಿದ್ದು ಇತ್ತು ಮತ್ತು ಸದರಿ ಟಿಪ್ಪರ .ಕಿ 10,00,000/-ರೂ  ಇರಬಹುದು ಮತ್ತು  ಟಿಪ್ಪರದಲ್ಲಿದ್ದ ಮರಳಿನ .ಕಿ 10.000/- ರೂ ಇರಬಹುದು. ನಂತರ ಸದರಿ ಅಕ್ರಮವಾಗಿ ಮರಳು ತುಂಬಿದ ಟಿಪ್ಪರನ್ನು ಪಂಚರ ಸಮಕ್ಷಮ ಜಪ್ತಿ ಪಂಚನಾಮೆ ಮೂಲಕ ವಶಕ್ಕೆ ತಗೆದುಕೊಂಡು ಅಫಜಲಪೂರ ಠಾಣೆಗೆ ಬಂದು ಪ್ರಕರಣ ದಾಖಲಿಸಲಾಗಿದೆ.

No comments: